ಪ್ರೀತಿಯ ಅಮ್ಮನಿಗೆ,
ಅಮ್ಮಾ ಹೇಗಿದ್ದೀಯಾ? ನಿನ್ನ ಪರಿಸ್ಥಿತಿ ಅರಿತೂ ಈ ಪ್ರಶ್ನೆ ಕೇಳುತ್ತಿರುವುದಕ್ಕೆ ಕ್ಷಮೆಯಿರಲಿ. ಇದು ನಾನು ನಿನಗೆ ಬರೆಯುತ್ತಿರುವ ಮೊದಲ ಪತ್ರ. ಇಂತಹ ಪರಿಸ್ಥಿತಿ, ಅಂದರೆ ಈ ಬಗೆಯ ಪತ್ರ ಬರೆಯುವ ಪರಿಸ್ಥಿತಿ ಪ್ರಪಂಚದಲ್ಲಿ ಯಾರಿಗೂ ಬಾರದಿರಲಿ.
ನನ್ನ ಬಗ್ಗೆ ನನಗೆ ನಾಚಿಕೆಯಾಗುತ್ತಿದೆ. ಜುಗುಪ್ಸೆಯಾಗುತ್ತಿದೆ. ಸಂಕಟದ ಸಮಯದಲ್ಲೂ ನಿನ್ನೊಂದಿಗೆ ಇರಲಾಗದ ನನ್ನ ಬದುಕಿಗೆ ಧಿಕ್ಕಾರವಿರಲಿ. ಒಂದೊಂದು ಸಲ ಕೆಲಸ ಬಿಟ್ಟು ಊರಿಗೆ ಓಡಿ ಬರಲೇ ಅನಿಸುತ್ತದೆ. ಆದರೆ ನಮ್ಮ ಮುಂದಿರುವ ಆರ್ಥಿಕ ಮುಗ್ಗಟ್ಟು, ಧೈರ್ಯವನ್ನು ಕಸಿಯುತ್ತದೆ.
ನಿನ್ನನ್ನು ಮುಖತಃ ಎದುರಿಸಲಾಗದೇ, ದೂರವಾಣಿಯಲ್ಲಿ ಹೇಳಲು ಸಾಧ್ಯವಾಗದೇ ಈ ಪತ್ರ ಬರೆಯುತ್ತಿದ್ದೇನೆ. ಕಾಲ ಚಕ್ರ ಉರುಳುತ್ತಲೇ ಇದೆ. ಹಿಂದೆ ಮುಂದೆ ಸಂತೆ ಸಾಲು… ಸಾವು ಯಾರಿಗಿಲ್ಲ ಎಂದೆಲ್ಲ ಹೇಳಿದರೂ/ಅರಿವಿದ್ದರೂ ಅಪ್ಪನ ಸಾವನ್ನು ನನಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲಸದ ಒತ್ತಡ, ಬೆಂಗಳೂರಿನ ವಾತಾವರಣದ ನಡುವೆ ಎಲ್ಲವನ್ನೂ ತುಸು ಮರೆತಂತೆ ಅನ್ನಿಸಿದರೂ, ಎದೆಯಲ್ಲಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಸಾಧ್ಯವೇ? ನೀನೇ ಹೇಳು.
ನನ್ನ ಪರಿಸ್ಥಿತಿಯೇ ಹೀಗಿದೆ. ಇನ್ನು ನಿನ್ನ ಪರಿಸ್ಥಿತಿಯನ್ನು ನಾನು ಯೋಚಿಸಬಲ್ಲೆ. ದೇವರು ನಮಗೆ ಮೋಸ ಮಾಡಿದ. ನಮ್ಮ ಕುಟುಂಬದಲ್ಲಿನ ನಗು ಕಂಡು ಅವನಿಗೆ ಹೊಟ್ಟೆಕಿಚ್ಚಾಗಿದೆ. ಈಗ ಅವನಿಗೆ ತುಸು ನೆಮ್ಮದಿ ಸಿಕ್ಕಿರಬಹುದು! ಕಷ್ಟಗಳು ನಮಗೆ ಹೊಸವೇನಲ್ಲ. ಆದರೆ ಆಗ ಧೈರ್ಯವಿತ್ತು. ನಮ್ಮಲ್ಲಿ ಛಲವಿತ್ತು. ಏನನ್ನೇ ಆಗಲಿ ಎದುರಿಸುವ ಉತ್ಸಾಹ ಇತ್ತು. ಎಲ್ಲಕ್ಕೂ ಮುಖ್ಯವಾಗಿ ಅಪ್ಪ ಇದ್ದರು.
ನಮ್ಮ ಪಾಲಿಗೆ ನೀನೀಗ ಅಮ್ಮ ಮಾತ್ರವಲ್ಲ… ಅಪ್ಪನೂ ಆಗಬೇಕು. ಆಗದ ಹೊರತು ಬೇರೆ ದಾರಿಗಳಿಲ್ಲ. ಇಷ್ಟು ವರ್ಷ ನಿನ್ನ ಮಕ್ಕಳಿಗೆ ನೆರಳು ನೀಡಿದ ನೀನು, ಇನ್ನು ಮುಂದೆಯೂ ನಮ್ಮ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನ್ನದು. ಅಪ್ಪನನ್ನು ನಾವು ವಿಧಿಯ ಆಟದಲ್ಲಿ ಕಳೆದುಕೊಂಡಿದ್ದೇವೆ. ಸೋತಿದ್ದೇವೆ. ಆದರೆ ನಾವು ಕಲ್ಲಾಗೋಣ. ನಮ್ಮ ಸೌಭಾಗ್ಯ ಕಸಿದ, ಅವನಿಗೆ ನಾವ್ಯಾಕೆ ಹೆದರಬೇಕು?
ಅಮ್ಮ ನೀನು ಧೈರ್ಯ ತೆಗೆದುಕೊಳ್ಳಬೇಕು. ಕಾಲಕಾಲಕ್ಕೆ ಸರಿಯಾಗಿ ಊಟ ಮಾಡು. ನೀನು ನಮಗಾಗಿ ವಿಶೇಷವಾಗಿ ಈ ದಡ್ಡನಿಗಾಗಿ ಎಲ್ಲವನ್ನೂ ಎದುರಿಸಲೇಬೇಕು. ನಾನಿಂದು ಅನಾಥನಾಗಿದ್ದೇನೆ. ಆದರೆ ನೀನಿರುವೆ ಎಂಬ ಧೈರ್ಯ ತುಸು ಸಮಾಧಾನ ತಂದಿದೆ. ಅಣ್ಣನಿಗೆ ಧೈರ್ಯ ಹೇಳು. ಊರಲ್ಲಿ ಬೇಸರವಾದರೆ, ಬೆಂಗಳೂರಿಗೆ ಬಾ…
ಅಮ್ಮ ನಿನ್ನ ದುಃಖ ಮತ್ತು ನೋವನ್ನು ನಾನು ಊಹಿಸಿಯೇ ಗಾಬರಿಕೊಂಡಿದ್ದೇನೆ. ಅದನ್ನೆಲ್ಲ ಅನುಭವಿಸುತ್ತ, ನಮಗೆಲ್ಲ ಧೈರ್ಯ ಹೇಳುವವಳಂತೆ ನೀನು ನಟಿಸುತ್ತಿರುವುದನ್ನು ನಾ ಬಲ್ಲೆ. ನಿನ್ನ ಮನದಾಳದಲ್ಲೀಗ ಅಗ್ನಿಪರ್ವತವಿದೆ. ಆದರೆ ಮನುಷ್ಯರ ಕೈಯಲ್ಲಿ ಏನಿದೆ? ಅಪ್ಪನ ಉಳಿವಿಗಾಗಿ ಎಲ್ಲರೂ ಕೈ ಚಾಚಿದರು… ಆದರೆ ಅವನು ಕೈಕೊಟ್ಟ. ಸಮಾಧಾನ ಮಾಡಿಕೋ…
ಅಪ್ಪ ಬದುಕಿರುವ ತನಕ, ನೀನು ಅವರಿಗಾಗಿಯೇ ಬದುಕಿದೆ. ಈಗ ನಮಗಾಗಿ ಬದುಕು. ಅಪ್ಪನಿಗೆ ಹೆಂಡತಿಯಾಗಿ, ಗೆಳತಿಯಾಗಿ, ಮಾಡಿದ ತಪ್ಪುಗಳ ಕ್ಷಮಿಸುವ ಮತ್ತು ಸರಿಪಡಿಸುವ ತಾಯಿಯಾಗಿ ಜೊತೆಯಲ್ಲಿದ್ದೆ. ನಿನ್ನ ಬಗೆಗೆ ಅಪ್ಪನಿಗೆ ಸಾಕಷ್ಟು ಒಲವಿತ್ತು. ಹೀಗಾಗಿಯೇ ಅಮ್ಮನ ಮನಸ್ಸನ್ನು ನೋಯಿಸಬೇಡಿ ಎಂದು ನಮಗೆಲ್ಲ ಹೇಳುತ್ತಿದ್ದರು. ಅಪ್ಪನಿಗೆ ಸುಖ ನೀಡಲು/ ಅವರ ಕಷ್ಟಗಳ ಹಗುರಗೊಳಿಸಲು ನೀನು ಶಕ್ತಿಮೀರಿ ಪ್ರಯತ್ನಿಸಿರುವುದನ್ನು ನಾವು ಕಂಡಿದ್ದೇವೆ.
ಅವರಿಗದು ಸಾಯುವ ವಯಸ್ಸಲ್ಲ. ಆದರೆ ನಮ್ಮ ದುರದೃಷ್ಟದಿಂದ ನಡು ನೀರಲ್ಲಿ ನಮ್ಮನ್ನು ನಿಲ್ಲಿಸಿ, ತಮ್ಮ ಪಾಡಿಗೆ ತಾವು ಹೊರಟು ಹೋದರು. ಅವರಿಗೆ ಹೋಗುವ ಮನಸ್ಸಾದರೂ ಎಲ್ಲಿತ್ತು. ಅವನೇ ಗುಬ್ಬಚ್ಚಿಯನ್ನು ಹಾವು ಎತ್ತಿಕೊಂಡು ಹೋದಂತೆ, ಅಪ್ಪನನ್ನು ಎತ್ತಿಕೊಂಡು ಹೋದ. ಅಪ್ಪ ಇರುವವರೆಗೂ ಸುಖವಾಗಿದ್ದರು. ಜನರ ಪ್ರೀತಿಗೆ ಪಾತ್ರರಾಗಿದ್ದರು. ಒಬ್ಬ ಮನುಷ್ಯನಿಗೆ ಇಷ್ಟು ಸಾಕಲ್ಲವೇನಮ್ಮ… ?
ಅಪ್ಪ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಅವರು ನಮ್ಮ ಜೊತೆಯಲ್ಲಿಲ್ಲ. ಮನಸ್ಸಿನಲ್ಲಿದ್ದಾರೆ. ಮುಂದೆಯೂ ಇರುತ್ತಾರೆ. ಅವರ ಕನಸುಗಳಿಗೆ ನಾವು ಜೀವ ತುಂಬೋಣ. ಅವರ ಹಾದಿಯಲ್ಲಿಯೇ ಸಾಗೋಣ.
ಅಮ್ಮ ನಿನಗಾಗಿ ಮಿಡಿಯುವ ಜೀವಗಳು ಸಾಕಷ್ಟಿವೆ ಎನ್ನುವುದನ್ನು ನೀನು ಮರೆಯಬೇಡ. ನೀನು ಚೆನ್ನಾಗಿದ್ದರಷ್ಟೇ ನಾವಿಲ್ಲಿ ಉಸಿರಾಡಲು ಸಾಧ್ಯ. ಕಷ್ಟಗಳ ಮೂಟೆ ನಿನ್ನ ಮೇಲೆ ಬಿದ್ದಿದೆ. ಆದರೆ ನೀನು ಒಂಟಿಯಲ್ಲ. ನಿನ್ನೊಂದಿಗೆ ನಾವು ಮೂರು ಜನ ಮಕ್ಕಳಿದ್ದೇವೆ.
ಬದುಕು ಅಂದರೆ ಅಷ್ಟೇ ಅನಿಸುತ್ತದೆ. ಬಂದದ್ದನ್ನೆಲ್ಲ ಎದುರಿಸಲೇಬೇಕು. ಒಂದು ಪಡೆಯಲು ಇನ್ನೊಂದನ್ನು ಕಳೆದುಕೊಳ್ಳಬೇಕು. ಆದರೆ ನಮ್ಮ ಬದುಕಿನಲ್ಲಿ ಪಡೆದುದಕ್ಕಿಂತಲೂ ಕಳೆದುಕೊಂಡದ್ದೇ ಹೆಚ್ಚು. ಆದರೆ ಏನು ಮಾಡಲು ಸಾಧ್ಯ? ಯೋಗಿ ಪಡೆದದ್ದು ಯೋಗಿಗೆ. ಜೋಗಿ ಪಡೆದದ್ದು ಜೋಗಿಗೆ. ಬಂದದ್ದೆಲ್ಲ ಬರಲಿ ಎದುರಿಸೋಣ.
ಅಮ್ಮ, ದೇವರು ನಿನಗೆ(ನಮಗೆ) ಮೋಸ ಮಾಡಿದ್ದಾನೆ. ಆದರೂ ನೀನು ಅವನನ್ನು ನಂಬು. ಕಾರಣ; ಅವನು ದೇವರು! ಆತ ನಿನ್ನ ಗಂಡ-ಮಕ್ಕಳಿಗೆ ಹಿತ ಕೊಡಲಿ ಎಂದು ಈವರೆಗೆ ಪೂಜಿಸುತ್ತಿದ್ದೆ. ಇನ್ನು ಮುಂದೆ ಬೇಡಿಕೆ ಸಲ್ಲಿಸದೆ ಪೂಜಿಸು. ಆವಾಗಲಾದರೂ ಆ ದೇವರಿಗೆ ನಾಚಿಕೆಯಾಗಲಿ.
ಅಮ್ಮ ಪ್ರಪಂಚ ವಿಚಿತ್ರವಾದುದು. ಉಸಿರಿಡುವ ತನಕ ಒದ್ದಾಟ ತಪ್ಪದು. ಲಾಭವೋ, ನಷ್ಟವೋ… ಈ ಸಮುದ್ರ ಈಜಲೇಬೇಕು. ಈಜಿದವನಿಗೆ ಮುಕ್ತಿ. ಮುಕ್ತಿ ಮಾತು ಪಕ್ಕಕ್ಕಿರಲಿ, ನಮಗಾಗಿ ನೀನು ಈಜಬೇಕಮ್ಮ. ಯಾಕೆಂದರೆ, ನಿನ್ನ ಮಡಿಲಲ್ಲಿ ನಾವಿದ್ದೇವೆ.
ನಿನ್ನ ನೋವು ನನಗೆ ಗೊತ್ತು. ಅದನ್ನು ಮರೆಯುವುದು ಆಗದ ಮಾತು. ಆದರೆ ಕಷ್ಟ ಎದುರಿಸಲು ಶರೀರವನ್ನು ಗಟ್ಟಿ ಮಾಡಿಕೊಳ್ಳಮ್ಮ! ನಾಳೆಗಳಿಗಾಗಿ ನಾವು ಇಂದು ಬದುಕಬೇಕು. ಅದಕ್ಕಾಗಿ ನಮಗಾಗಿ ನೀನು ಇಷ್ಟು ಮಾಡಲಾರೆಯಾ?
ನನ್ನ ಈ ಪತ್ರ ಓದಿ ನಿನಗೆ ನಗು ಬರಬಹುದು. ನನಗೆ ಸಮಾಧಾನ ಹೇಳುವಷ್ಟು ದೊಡ್ಡವನಾದನೇ ಎಂದು ಸಿಟ್ಟು ಕೂಡಾ ಬರಬಹುದು. ಆದರೆ ನನ್ನಮ್ಮನಿಗೆ ನಾನು ಇಷ್ಟು ಹೇಳಲೇಬೇಕು ಎಂದೆನಿಸಿ ಈ ಪ್ರಯತ್ನ ಮಾಡಿದ್ದೇನೆ. ಈ ಪತ್ರ ಓದಿದ ಮೇಲೆ ನಿನಗೇನನಿಸಿತು?
ಅಮ್ಮ, ನೀನೂ ಬರೆಯುವುದನ್ನು ಆರಂಭಿಸು. ಸೊಗಸಾಗಿ ಬರೆಯುವ ಶಕ್ತಿ ನಿನ್ನಲ್ಲಿದೆ… ಪ್ರಯತ್ನಿಸು… ಕನಿಷ್ಟ, ನಿನ್ನ ಮಗನಿಗಾಗಿ ಬರೆಯಲಾದರೂ ಪ್ರಯತ್ನಿಸು.
ಈ ಪತ್ರದಲ್ಲಿ ತಪ್ಪಿದ್ದರೆ ಕ್ಷಮಿಸು ಎಂದು ನಾನು ಕೇಳುವುದಿಲ್ಲ! ಯಾಕೆಂದರೆ; ಇದು ನನ್ನ ಮೊದಲ ತಪ್ಪಲ್ಲ.
ನಮಸ್ಕಾರ.
-ನಿನ್ನ ಕುಮಾರಕಂಠೀರವ!
hi natesh babu, your articol is very good for me,and other all friends so keep it up,and this articol is my real life story so heartly congrets to you, and give me your e-mail id plz,i am naveen from greynium
Hello Natesh Babu
I understand the feelings you have written. I say you look at the positive side of your life & your Amma’s life. Your mother has grown children. That itself is some relief. At least she need not raise little children as a widow in India.
I understand how grief striken your mother is. Long ago I got to know a lady psychologist in the US who told me that it takes at least an year to overcome the grief of death of a loved one.
I say that some losses can never be overcome, but with time the mind heals.
Pause a second and think of women who raise their children all by themselves out of fate who loose their husband while their children are still young. And imagine even more hardship if such woman has to be both mother and father raising a kid in a foriegn country while trying hard to get ahead in her career.
So, thank god that yor mother is not in such a harsh circumstance. It could have been worse isn’t it? Thats all one can do to keep having courage to go on with life.
Now your dad is one with God. Let him be peaceful with God & I pray that your mother will look back & thank god for the wonderful life she had with her husband & now finds the strength to look for joy from her children & grand children & of course from God. As I stated earlier some losses leave a void that cannot be filled or substituted. I agree that your mother has to go on living a peaceful life for the aske of her kids.
I pray that your mother will be surrounded by good people who will erase the grief from her mind.
excellent consolation, if not posted , post it first.
Ri Natesh,
Nimma patra odi..nange kaNNalli neeru bandubiDthu …Amma illa andre jeevana kalpiskolloke agolla..:(
Excellent consolation! Thank you Mr. Guru. The consolation poured out from my soul as I know how harsh it can be when a woman with little children looses her husband.
I also know that it is possible to conquer that grief and be not only a mother but also a father.
I look forward to reading the articles written by Mr. Natesh Babu’s mom.
hai your artical is very good . i like a lot i read three times realy it is graet about mom .
This letter is a evergreen centimental letter.I hope u have got a better wife who has made u forget ur bad incidents atleast a little.I have read this letter of about more than 10 times .